ಮೈಸೂರು : ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಕಿರಿಯ ಪೀಠಾಧಿಪತಿಗಳಾದ ಶ್ರೀ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳ 23ನೇ ಚಾತುರ್ಮಾಸ್ಯ ವೈಭವವಾಗಿ ನೆರವೇರುತ್ತಿದ್ದು ಮೊದಲಿಗೆ ಶ್ರೀಗಳಿಂದ ಗೋಪೂಜೆ ನೆರವೇರಿತು.

ತರುವಾಯ ಆಶ್ರಮದ ಆವರಣದಲ್ಲಿರುವ ಶ್ರೀ ದತ್ತ ವೆಂಕಟೇಶ್ವರಸ್ವಾಮಿಗೆ ಅಭಿಷೇಕ ನೆರವೇರಿತು. ಇದೇ ಸಂದರ್ಭದಲ್ಲಿ ಶ್ರೀ ಕುಮಾರೇಶ್ ಮತ್ತು ಶ್ರೀಮತಿ ಜಯಂತಿ ಕುಮರೇಶ್ ಅವರಿಂದ ಸಂಗೀತ ಸೇವೆಯೊಂದಿಗೆ ಶ್ರೀ ಚಕ್ರ ಪೂಜೆಯನ್ನು ಪರಮ ಪೂಜ್ಯರಿಂದ ನೆರವೇರಿತು. ಬಳಿಕ ದತ್ತ ಯಾಗವು ನಾದ ಮಂಟಪದಲ್ಲಿ ವಿಶೇಷವಾಗಿ ಜರುಗಿತು.ಸಂಜೆ ಪೌಂಡರೀಕಾ ಮಂಟಪದಲ್ಲಿ ಜರುಗಿದ ಧರ್ಮಸಭೆಯಲ್ಲಿ ಶ್ರೀ ವಿಷ್ಣುಪುರಾಣ ಕಥಾ ಮಾಲಿಕೆಯ ಕುರಿತಾಗಿ ಪ್ರವಚನವನ್ನು ಶ್ರೀಗಳು ನೀಡಿದರು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಮಠಕ್ಕೆ ಆಗಮಿಸಿ ವಿಷ್ಣುಪುರಾಣ ಕಥೆಯನ್ನ ಆಲಿಸಿ ಭಕ್ತಿ ಭಾವದಲ್ಲಿ ಲೀನರಾದರು.





